Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸರ್‍ಗಾ ತಿಚ್ಯಾ ನಾಸಾಸಾಟ್ನಿ ಖುಶಿ ಹೊ! ದೆವಾಚ್ಯಾ ಲೊಕಾನು, ಅಪೊಸ್ತಲಾನು ಅನಿ ಪ್ರವಾದ್ಯಾನು, ಖುಶಿ ಹೊವಾ! ಕಶ್ಯಾಕ್ ಮಟ್ಲ್ಯಾರ್ ತೆನಿ ತುಮ್ಕಾ ಕರಲ್ಲ್ಯಾ ಸಗ್ಳ್ಯಾ ಕಾಮಾಂಚ್ಯಾ ತಕ್ ದೆವಾನ್ ತಿಕಾ ಶಿಕ್ಷಾ ದಿಲ್ಯಾನಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:20
26 ತಿಳಿವುಗಳ ಹೋಲಿಕೆ  

ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”


ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.


ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.


ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.


ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.


ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.


ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.


ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.


ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.


ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು