Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಎಲೈ ಬಾಬಿಲೋನೇ , ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಾಬೆಲೇ, ನಿನ್ನಲ್ಲಿ ವೀಣೆಗಾರರೂ ವಾದ್ಯಗಾರರೂ ಕೊಳಲೂದುವವರೂ ತುತೂರಿಯವರೂ ಮಾಡುವ ಧ್ವನಿಯು ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿನ್ನಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಾಬಿಲೋನೇ, ನಿನ್ನಲ್ಲಿ ಮತ್ತೆ ತಂತಿವಾದ್ಯ ನುಡಿಸುವವರು, ಸಂಗೀತಗಾರರು, ಕೊಳಲೂದುವವರು, ತುತೂರಿಯವರು, ಮಾಡುವ ಧ್ವನಿ ಎಂದೂ ಕೇಳಿಸದು. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಎಂದೂ ಕಂಡುಬಾರನು. ಬೀಸುವ ಕಲ್ಲಿನ ಶಬ್ದವು, ನಿನ್ನಲ್ಲಿ ಎಂದೂ ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹಾರ್ಪ್ ಮನ್ತಲ್ಯಾ ವಾಜಾಪಾಚೊ ಆವಾಜ್ ಅನಿ ಮಾನ್ಸಾಂಚಿ ಧನಾ, ಬಾರಿಕ್ಲೊ ಪಂವೊ ಅನಿ ಮೊಟ್ಯಾ ಪಂವ್ಯಾಚೊ ಅವಾಜ್ ತುಜ್ಯಾ ಭುತ್ತುರ್ ಅನಿ ಕನ್ನಾಚ್ ಆಯ್ಕೊ ಯೆಯ್ನಾ! ಕಸ್ಲೆಬಿ ಹೊಂವ್ದಿತ್ ಕಾಮ್ ಕರ್ತಲೊ ಎಕ್‍ಬಿ ಕಾಮ್ಗಾರಿ ತುಜ್ಯಾ ಭುತ್ತುರ್ ಗಾವಿನಾ; ಅನಿ ದಳ್ತಲ್ಯಾ ಮೊಟ್ಯಾ ಗುಂಡ್ಯಾಚೊ ಅವಾಜ್ ಅನಿಫಿಡೆ ಆಯ್ಕೊ ಯೆಯ್ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:22
10 ತಿಳಿವುಗಳ ಹೋಲಿಕೆ  

ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.


ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’


ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.


ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.


ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,


ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು