Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಸರ್‍ಗಾ ವೈನಾ ಅನಿಎಕ್ ಅವಾಜ್ ಮಿಯಾ ಆಯಿಕ್ಲೊ, ಮಾಜ್ಯಾ ಲೊಕಾನು ಭಾಯ್ರ್ ಯೆವಾ! ತಿಚೆಕ್ನಾ ಭಾಯ್ರ್ ಯೆವಾ! ತುಮಿ ತಿಚ್ಯಾ ಪಾಪ್ನಾತ್ನಿ ಭಾಗ್ ಘೆತಲೆ ನಕ್ಕೊ; ತಿಚ್ಯಾ ಶಿಕ್ಷೆತ್ ತುಮಿ ಭಾಗ್ ಘೆತಲೆ ನಕ್ಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:4
16 ತಿಳಿವುಗಳ ಹೋಲಿಕೆ  

ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.


ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.


ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.


‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.


ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.


ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು