Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನ ತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ನಮ್ಮ ದೇವರು ವೇಶ್ಯೆಯನ್ನು ದಂಡಿಸಿದನು. ಅವಳ ಲೈಂಗಿಕ ಪಾಪದಿಂದಲೇ ಲೋಕವು ಕೆಟ್ಟುಹೋಯಿತು. ಆತನು ತನ್ನ ಸೇವಕರ ರಕ್ತಕ್ಕೆ ಪ್ರತಿಯಾಗಿ ಆ ವೇಶ್ಯೆಯನ್ನು ದಂಡಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತೆಚಿ ನಿರ್ನಯಾ ಸಮಾ ಅನಿ ಖರಿ ಹಾತ್! ತೆನಿ ಜಿಮ್ನಿ ವರ್ತಿ ಅಪ್ನಾಚ್ಯಾ ಬುರ್ಶ್ಯಾ ಚಾಲಿನ್ ವೆಭಿಚಾರಾಚೆ ಕಾಮ್ ಕರ್‍ತಲಿಕ್ ಚುಕಿದಾರ್ ಮನುನ್ ಠರ್‍ವುಲ್ಯಾನಾಯ್. ದೆವಾನ್ ತಿಕಾ ಶಿಕ್ಷಾ ಲಾವ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ತೆನಿ ತ್ಯೆಚ್ಯಾ ಸೆವಕಾಕ್ನಿ ಜಿವಾನಿ ಮಾರಲ್ಲಿನ್”, ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:2
16 ತಿಳಿವುಗಳ ಹೋಲಿಕೆ  

ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.


ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.


ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು