Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ : “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು - ದೇವರ ದಾಸರೆಲ್ಲರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಆ ಧ್ವನಿಯು, “ನಮ್ಮ ದೇವರ ಸೇವೆ ಮಾಡುವ ಜನರೆಲ್ಲರೇ, ಆತನಿಗೆ ಸ್ತೋತ್ರ ಮಾಡಿರಿ! ನಮ್ಮ ದೇವರಿಗೆ ಗೌರವ ನೀಡುವ ಚಿಕ್ಕವರೇ, ದೊಡ್ಡವರೇ, ಆತನಿಗೆ ಸ್ತೋತ್ರ ಮಾಡಿರಿ!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾನಾ ಸಿಂಹಾನಸಾಕ್ನಾ ಯೆಲ್ಲ್ಯಾ ಎಕ್ ಧನಾನ್, “ದೆವಾಚ್ಯಾ ಸಗ್ಳ್ಯಾ ಸೆವಕಾನೊ ಅನಿ ಸಗ್ಳ್ಯಾ ಲೊಕಾನು ಅನಿ ದೆವಾಕ್ ಭಿಂವ್ನ್ ಚಲ್ತಲ್ಯಾ ಮೊಟ್ಯಾನೊ ಅನಿ ಬಾರಿಕ್ಲ್ಯಾನೊ ಅಮ್ಚ್ಯಾ ದೆವಾಚಿ ಸುತ್ತಿ ಕರಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:5
14 ತಿಳಿವುಗಳ ಹೋಲಿಕೆ  

ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.


ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!


ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.


ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.


ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.


ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.


ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.


ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು