Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಜ್ಞದ ಕುರಿಯಾದಾತನ ವಿವಾಹ ಕಾಲವು ಬಂತು; ಆತನಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ; ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು. ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಅವರನ್ನು ಮಹಿಮೆಪಡಿಸೋಣ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಮಿ ಸಂತೊಸ್ ಹೊವಾ, ಅನಿ ಖುಶಿ ಹೊವಾ; ತ್ಯೆಚ್ಯಾ ಮೊಟ್ಯಾಪಾನಾಚ್ಯಾ ವಿಶಯಾತ್ ಹೊಗ್ಳುವಾ! ಕಶ್ಯಾಕ್ ಮಟ್ಲ್ಯಾರ್ ಬೊಕ್ಡಾಚ್ಯಾ ಲಗ್ನಾಚೊ ಎಳ್ ಯೆವ್ನ್ ಪಾವ್ಲೊ, ಅನಿ ನ್ಹವ್ರಿ ಅಪ್ನಾಕುಚ್ ಲಗ್ನಾಕ್ ತಯಾರ್ ಕರುನ್ ಘೆವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:7
29 ತಿಳಿವುಗಳ ಹೋಲಿಕೆ  

ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.


“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.


ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.


ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!


ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ. ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.


ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.


ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.


ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.


ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು