Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿವಿುತ್ತ ಬಾಧೆಯನ್ನು ಸೈರಿಸಿಕೊಂಡು ಬೇಸರಗೊಳ್ಳಲಿಲ್ಲ; ಇದನ್ನೆಲ್ಲಾ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಿಯಾ ಲೈ ಸೊಸುನ್ ಘೆವ್ನ್ ಹಾಸ್, ಮಾಕಾ ಲಾಗುನ್ ತಿಯಾ ಲೈ ಕಸ್ಟ್ ಕಾಡ್ಲೆಯ್. ಜಾಲ್ಯಾರ್‍ಬಿ ತಿಯಾ ಮಾಕಾ ಸೊಡುನ್ ಜಾವ್ಕನೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:3
49 ತಿಳಿವುಗಳ ಹೋಲಿಕೆ  

ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.


ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.


ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.


ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.


ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.


ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.


ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.


ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.


ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.


ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.


ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.


ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ,


ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.


ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.


ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.


ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.


ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.


ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.


ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.


ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗೆಲ್ಲಾ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು.


ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.


ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.


ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.


ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.


ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು.


ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದಿದೆ.


ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,


ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.


ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು