Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನ್ತಲೆ ಆಯ್ಕ್! ಜೊ ಕೊನ್ ಮೊಟ್ಯಾ ಮಾಪಾನ್ ಜಿಕ್ತಾ ತೆಕಾ ಮಿಯಾ ದೆವಾಚ್ಯಾ ಮಳ್ಯಾತ್ಲ್ಯಾ ಜಿವ್‍ ದಿತಲ್ಯಾ ಝಾಡಾಚೆ ಹನ್ನ್ ಖಾತಲೊ ಹಕ್ಕ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:7
36 ತಿಳಿವುಗಳ ಹೋಲಿಕೆ  

ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.


ಕಿವಿಯುಳ್ಳವನು ಕೇಳಲಿ,


ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.


ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.


ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.


ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.


ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.


ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.


ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.


ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.


ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.


ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.


ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.


ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.


“ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು