Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಜೊ ತರಾಸ್ ಮಾಕಾ ಗೊತ್ತ್ ಹಾಯ್.ತಿಯಾ ಗರಿಬ್ ಮನುನ್ ಮಾಕಾ ಗೊತ್ತ್ ಹಾಯ್. ಖರೆ ಮಟ್ಲ್ಯಾರ್ ತಿಯಾ ಸಾವ್ಕಾರ್! ಜುದೆವ್ ನ್ಹಯ್ ಹೊಲ್ಯಾರ್ಬಿ ಅಪ್ನಿ ಜುದೆವ್ ಮನುನ್ ಸಾಂಗ್ತಲ್ಯಾ ಲೊಕಾನಿ ತುಜ್ಯಾ ವಿರೊದ್ ಬೊಲಲ್ಲ್ಯಾ ಬುರ್ಶ್ಯಾ ವಿಶಯಾಂಚ್ಯಾ ವಿಶಯಾತ್ ಮಾಕಾ ಗೊತ್ತ್ ಹಾಯ್. ತೆನಿ ಸೈತಾನಾಕ್ ಸಮಂದ್ ಪಡಲ್ಲೊ ಎಕ್ ತಾಂಡೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:9
29 ತಿಳಿವುಗಳ ಹೋಲಿಕೆ  

ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.


ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.


ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.


ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.


ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.


ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.


ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.


ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.


ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,


ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು