Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅನಿ ಮರಲ್ಲಿ ಲೊಕಾ ಮೊಟಿ ಅನಿ ಬಾರಿಕ್ಲಿ ಸಗ್ಳಿ ಲೊಕಾ ಸಿವಾಸನಾಚ್ಯಾ ಇದ್ರಾಕ್ ಇಬೆ ಹೊತ್ತಿ ಮಿಯಾ ಬಗಟ್ಲೊ. ತನ್ನಾ ಪುಸ್ತಕಾ ಉಗ್ಡುನ್ ಹೊಲಿ, ಮಾನಾ ಅನಿಎಕ್ ಪುಸ್ತಕ್ ಉಗ್ಡುನ್ ಹೊಲೆ ಝಿತ್ತ್ಯಾಂಚೆ ಪುಸ್ತಕ್ ತೆ. ಮರಲ್ಲ್ಯಾ ಲೊಕಾಕ್ನಿ ತೆನಿ ಕರಲ್ಲ್ಯಾ ಕಾಮಾಂಚ್ಯಾ ವಿಶಯಾತ್ ಲಿವಲ್ಲ್ಯಾ ಪರ್ಕಾರ್ ಝಡ್ತಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:12
34 ತಿಳಿವುಗಳ ಹೋಲಿಕೆ  

ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


“ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.


ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.


“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.


ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.


ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.


ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು