Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ತ್ಯಾ ಭಯಾನಕ್ ಸಾಪಾಕ್, ತ್ಯಾ ಅದ್ಲ್ಯಾ ಕಾಲಾತ್ಲ್ಯಾ ಸಾಪಾಕ್, ತೊಚ್ ತೊ ಗಿರೊ ನಾಹೊಲ್ಯಾರ್ ಸೈತಾನ್. ತೆಕಾ ಧರ್‍ಲ್ಯಾನ್ ಅನಿ ಎಕ್ ಹಜಾರ್ ವರ್ಸಾಂಚ್ಯಾಸಾಟ್ನಿ ತೆಕಾ ಸರ್‍ಪೊಳ್ಯಾನಿ ಘಟ್ ಭಾಂದ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:2
31 ತಿಳಿವುಗಳ ಹೋಲಿಕೆ  

ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.


ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,


ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.


ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.


ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.


ಯೆಹೋವನು ಸೈತಾನನನ್ನು, “ಎಲ್ಲಿಂದ ಬಂದೆ?” ಎಂದು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದು ಹೇಳಿದನು.


ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.


ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.


ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.


ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.


ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.


ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.


ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.


ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಅವನು ಮತ್ತೆ ಸಾವಿರ ಮೊಳ ಅಳೆದನು. ಅದು ನನ್ನಿಂದ ದಾಟಲಾಗದ ನದಿಯಾಗಿತ್ತು; ನೀರು ಆಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು, ದಾಟಲಾಗದ ನದಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು