Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:4
40 ತಿಳಿವುಗಳ ಹೋಲಿಕೆ  

ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”


ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.


“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.


ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.


ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.


ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”


ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.


ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.


ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;


ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.


ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.


ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”


ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.


ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. ‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.


ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು