Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಶಾರಾಕ್ ಉಜ್ವೊಡ್ ದಿವ್ಕ್ ದಿಸ್ ನಾಹೊಲ್ಯಾರ್ ಚಂದ್ರಾಮ್ ಪಾಜೆ ಮನುನ್ ನಾ, ಕಶ್ಯಾಕ್ ಮಟ್ಲ್ಯಾರ್ ದೆವಾಚಿ ಮಹಿಮಾಚ್ ತ್ಯಾ ಶಾರಾ ವರ್ತಿ ಫಾಕಲ್ಲಿ ರ್‍ಹಾತಾ, ಅನಿ ಬೊಕ್ಡುಚ್ ತ್ಯಾ ಶಾರಾಚೊ ದಿವೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:23
25 ತಿಳಿವುಗಳ ಹೋಲಿಕೆ  

ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.


ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ.


ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;


ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.


ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.


ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.


ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.


ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು