Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ನಡತೆಯ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನ ಕೈಯಲ್ಲಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಆಯ್ಕಾ!” ಜೆಜು ಮನ್ತಾ, “ಮಿಯಾ ಲಗ್ಗುನಾಚ್ ಯೆವ್ಲಾ! ಮಿಯಾ ಸಗ್ಳ್ಯಾಕ್ನಿ ತೆಂಚ್ಯಾ ತೆಂಚ್ಯಾ ಕಾಮಾಂಚ್ಯಾ ಪರ್ಕಾರ್ ತೆಂಕಾ ದಿತಲೆ ಭೊಮಾನ್ ಘೆವ್ನ್ ಯೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:12
19 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.


ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.


ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.


“ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.


ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.


ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.


ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.


ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು.


ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು