Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆ ಕೊನ್ ಅಪ್ನಾಚೆ ಝಗೆ ಧುವ್ನ್ ಪವಿತ್ರ್ ಕರುನ್ ಘೆತ್ಯಾತ್ ತೆನಿ ಕವ್ಡೆ ಸುಖಿ, ಅಸೆ ತೆಂಕಾ ಜಿವ್‍ ದಿತಲ್ಯಾ ಝಾಡಾಚೆ ಫಳ್ ಖಾತಲೊ ಹಕ್ಕ್ ಗಾವ್ತಾ ಅನಿ ದಾರಾನಿತ್ನಾ ಶಾರಾತ್ ಭುತ್ತುರ್ ಗುಸ್ತಲೊ ಹಕ್ಕಬಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:14
31 ತಿಳಿವುಗಳ ಹೋಲಿಕೆ  

ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.


“ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.


ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.


ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.


ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,


ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.


ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?


ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,


ಕಾದುಕೊಂಡು, ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳುವವನು ಧನ್ಯನು.


ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.


ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,


ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು