Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕಶ್ಯಾಕ್ ಮಟ್ಲ್ಯಾರ್ ಮಾಜೆ ಹುಕುಮ್ ಸಂಬಾಳುನ್ ಘೆವ್ನ್ ಥವ್ನ್ ಘೆಟ್ಲ್ಯಾಸಿ . ಹ್ಯಾ ಜಗಾತ್ಲ್ಯಾ ಸಗ್ಳ್ಯಾ ಲೊಕಾಂಚಿ ಪರಿಕ್ಷಾ ಕರುಕ್ ಮನುನ್ ಹ್ಯಾ ಜಗಾ ವರ್ತಿ ಯೆತಲ್ಯಾ ತರಾಸಾತ್ನಾಬಿ ಮಿಯಾ ತುಮ್ಕಾ ರಾಕುನ್ ಥವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:10
30 ತಿಳಿವುಗಳ ಹೋಲಿಕೆ  

ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.


ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.


ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.


ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.


ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.


ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.


ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.


“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.


ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.


ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು