Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:12
26 ತಿಳಿವುಗಳ ಹೋಲಿಕೆ  

ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,


ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.


ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,


ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.


ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.


ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು. ಹತ್ತು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು.


ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.


ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು