Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಿಯಾ ಪ್ರೆಮ್ ಕರ್ತಲ್ಯಾಕ್ನಿ ಮಿಯಾ ಜೊರ್ ಕರ್ತಾ ಅನಿ ಶಿಕ್ಷಾ ದಿತಾ. ತಿಯಾ ಉಮ್ಮೆದಿಚೊ ಹೊವ್ಚೊ, ಅನಿ ತುಜೆ ಪಾಪಾಚೆ ಜಿವನ್ ಸೊಡುನ್ ಬರೊ ಹೊವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:19
31 ತಿಳಿವುಗಳ ಹೋಲಿಕೆ  

ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.


ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.


ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.


ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.


ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.


ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.


ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.


ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ


ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?


ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.


ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.


ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,


ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.


ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.


ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ.


ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು