Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಆಕಾಶದಲ್ಲಿಯೂ ಭೂವಿುಯ ಮೇಲೆಯೂ ಭೂವಿುಯ ಕೆಳಗೆಯೂ ಸಮುದ್ರದ ಮೇಲೆಯೂ ಇರುವ ಎಲ್ಲಾ ಸೃಷ್ಟಿಗಳು ಅಂದರೆ ಭೂಮ್ಯಾಕಾಶಸಮುದ್ರಗಳೊಳಗೆ ಇರುವದೆಲ್ಲವೂ - ಸಿಂಹಾಸನಾಸೀನನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ ಮಾನ ಪ್ರಭಾವ ಆಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, ಯುಗಯುಗಾಂತರಗಳಲ್ಲಿಯೂ ಇರಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಸರ್ಗಾ ವೈಲಿ ಜನಾವರಾ, ಜಿಮ್ನಿ ವೈಲಿ ಜನಾವರಾ, ಅನಿ ಜಿಮ್ನಿಚ್ಯಾ ಖಾಯ್ಲಿ ಅನಿ ಸಮುಂದರಾತ್ಲಿ ಜನಾವರಾ ಅನಿ ಹ್ಯಾ ಜಗಾತ್ ರಚಲ್ಲೆ ಸಗ್ಳೆ ಗಿತ್ ಗಾವ್ತಲೆ ಮಿಯಾ ಆಯಿಕ್ಲೊ. ಸಿವಾಸನಾ ವರ್ತಿ ಬಸಲ್ಲ್ಯಾಕ್ ಅನಿ ಬೊಕ್ಡಾಕ್ ಸುತ್ತಿ, ಅನಿ ಮಾನ್, ಮಹಿಮಾ ಅನಿ ಪದ್ವಿ ಸದಾ ಸರ್ವತಾಕ್!.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:13
29 ತಿಳಿವುಗಳ ಹೋಲಿಕೆ  

ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,


ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.


ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ.


ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.


ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.


ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.


ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.


ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು