Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆನಿ ಮಡ್ಡಿಯಾಕ್ನಿ ಅನಿ ಗುಂಡ್ಯಾಕ್ನಿ ಬಲ್ವುನ್, ಅಮ್ಚ್ಯಾ ವೈನಿ ಯೆವ್ನ್ ಪಡಾ ಅನಿ ಸಿವಾಸನಾ ವರ್ತಿ ಬಸಲ್ಲ್ಯಾಚ್ಯಾ ನದ್ರೆತ್ನಾ ಅನಿ ಬೊಕ್ಡಾಚ್ಯಾ ರಾಗಾತ್ನಾ ಅಮ್ಕಾ ಧಾಪುನ್ ಸೊಡಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:16
21 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.


ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.


ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ,


ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.


ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.


ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.


ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು