Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಯಜ್ಞದ ಕುರಿಮರಿ ಮೂರನೆಯ ಮುದ್ರೆಯನ್ನು ಒಡೆದಾಗ, ಮೂರನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ. ಆಗ ಕಪ್ಪು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು - ಬಾ ಅನ್ನುವದನ್ನು ಕೇಳಿದೆನು. ಆಗ ಇಗೋ, ಕಪ್ಪು ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕುರಿಮರಿ ಆಗಿರುವವರು ಮೂರನೆಯ ಮುದ್ರೆಯನ್ನು ತೆರೆದಾಗ, ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು. ನಾನು ನೋಡಲು, ಕಪ್ಪಾದ ಒಂದು ಕುದುರೆಯನ್ನು ಕಂಡೆನು. ಅದರ ಸವಾರನು ತನ್ನ ಕೈಯಲ್ಲಿ ಒಂದು ತಕ್ಕಡಿಯನ್ನು ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾನಾ ಬೊಕ್ಡಾನ್ ತಿನ್ವೆಚೊ ಛಪ್ಪೊ ಫೊಡ್ಲ್ಯಾನ್; ಅನಿ ತಿನ್ವೆಚ್ಯಾ ಸಾವ್ಜಾನ್, “ಯೆ!” ಮನುನ್ ಮನ್ತಲೆ ಮಿಯಾ ಆಯಿಕ್ಲೊ. ಮಿಯಾ ಬಗ್ತಾನಾ ಥೈ ಎಕ್ ಕಾಳೆ ಘೊಡ್ಕೆ ಹೊತ್ತೆ. ತ್ಯೆಚ್ಯಾ ವರ್ತಿ ಸವಾರಿ ಕರ್ತಲ್ಯಾಚ್ಯಾ ಹಾತಿತ್ ಎಕ್ ತಾಕ್ಡಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:5
11 ತಿಳಿವುಗಳ ಹೋಲಿಕೆ  

ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು; ಎರಡನೆಯ ರಥಕ್ಕೆ ಕಪ್ಪು ಕುದುರೆಗಳು;


ಅನಂತರ ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಪಶ್ಚಿಮ ದೇಶಕ್ಕೆ ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳ ರಥ ದಕ್ಷಿಣ ದೇಶಕ್ಕೆ ಹೋದವು.


ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.


ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.


ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.


ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.


ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು