9 ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.
9 ಕುರಿಮರಿಯು ಐದನೆಯ ಮುದ್ರೆಯನ್ನು ತೆರೆಯಿತು. ಆಗ ಯಜ್ಞವೇದಿಕೆಯ ಕೆಳಗೆ ಕೆಲವು ಆತ್ಮಗಳಿರುವುದನ್ನು ನಾನು ನೋಡಿದೆನು. ದೇವರ ಸಂದೇಶಕ್ಕೂ ತಾವು ಸ್ವೀಕರಿಸಿ ಕೊಂಡ ಸತ್ಯಕ್ಕೂ ನಂಬಿಗಸ್ತರಾಗಿದ್ದ ಕಾರಣ ಕೊಲ್ಲಲ್ಪಟ್ಟವರ ಆತ್ಮಗಳೇ ಅವು.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.
ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.
ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.
ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.
ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.
ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.