Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇನ್ನು ಮೇಲೆ ಅವರಿಗೆ ಹಸಿವೆ ಇಲ್ಲ, ಬಾಯಾರಿಕೆ ಇಲ್ಲ; ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; ಬಾಯಾರಿಕೆಯಾಗಲಿ ಆಗುವುದಿಲ್ಲ. ಇದಲ್ಲದೆ ಸೂರ್ಯನ ಬಿಸಿಲಾದರೂ,’ ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಫಿಡೆ ಕನ್ನಾಬಿ ತೆಂಕಾ ಭುಕ್ ಹೊಂವ್ದಿತ್ ಸೊಸ್ ಹೊಂವ್ದಿತ್ ಲಾಗಿನಾ; ನಿಂಬಾರ್ ಹೊಂವ್ದಿತ್ ಅನಿ ಕಸ್ಲೊಬಿ ಝಳ್ ಹೊಂವ್ದಿತ್ ತೆಂಕಾ ಲಾಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:16
23 ತಿಳಿವುಗಳ ಹೋಲಿಕೆ  

ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.


ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.


ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.


ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.


ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.


ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.


ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.


ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.


ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.


ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು