Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ನಕ್ಷತ್ರದ ಹೆಸರು ‘ವಿಷಕನ್ಯೆ'. ನೀರಿನಲ್ಲಿ ಮೂರನೆಯ ಒಂದು ಭಾಗ ವಿಷವಾಯಿತು; ಇದರಿಂದಾಗಿ ಅನೇಕರು ನೀರನ್ನು ಕುಡಿದು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನೊಳಗೆ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ಕಹಿಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಅನೇಕರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ನಕ್ಷತ್ರಕ್ಕೆ “ಕಹಿ ಮರ” ಎಂದು ಹೆಸರು. ನೀರಿನಲ್ಲಿ ಮೂರನೆಯ ಒಂದು ಭಾಗವು ಕಹಿಯಾಯಿತು. ಈ ಕಹಿಯಾದ ನೀರನ್ನು ಕುಡಿದು ಅನೇಕ ಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ನಕ್ಷತ್ರದ ಹೆಸರು, ಮಾಚಿಪತ್ರೆ, ಆಗ ಮೂರರಲ್ಲಿ ಒಂದು ಭಾಗವು ಕಹಿಯಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತ್ಯಾ ಚಿಕ್ಕಿಚೆ ನಾಂವ್, ಕೊಡು ಪಾನಿಯಾಚೊ ತಿನಾತ್ಲೊ ಎಕ್ ಭಾಗ್ ಕೊಡು ಹೊವ್ನ್ ಬದಲ್ಲೊ, ಅನಿ ಹೆ ಪಾನಿ ಫಿಲ್ಲಿ ಸುಮಾರ್ ಲೊಕಾ ಮರುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಹೆ ಕೊಡು ಹೊಲ್ಲೆ ಪಾನಿ ಫಿಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:11
17 ತಿಳಿವುಗಳ ಹೋಲಿಕೆ  

ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.


ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.


“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.


ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.


ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”


ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ.


ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.


ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ.


ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.


ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.


“ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.


ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.


ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು