Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಭೂವಿುಯ ಮೇಲಿರುವ ಹುಲ್ಲನ್ನಾಗಲಿ ಯಾವ ಪಲ್ಯವನ್ನಾಗಲಿ ಮರವನ್ನಾಗಲಿ ಕೆಡಿಸದೆ ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ಕೆಡಿಸಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಂಕಾ ಗವಾತ್ ಹೊಂವ್ದಿ, ಬಾರಿಕ್-ಬಾರಿಕ್ ಝಾಡಾ ಹೊಂವ್ದಿ, ಮೊಟಿ ಝಾಡಾ ಹೊಂವ್ದಿ ಹಾಳ್ ಕರಿನಸ್ತಾನಾ, ಕೊನಾಚ್ಯಾ ಕಪಾಳಾ ವರ್ತಿ ದೆವಾಚ್ಯಾ ಛಪ್ಪ್ಯಾಚಿ ವಳಕ್ ನಾ ತ್ಯಾ ಲೊಕಾಕ್ನಿ ತರಾಸ್ ಕರುಚೆ ಮನುನ್ ಸಾಂಗಟಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:4
15 ತಿಳಿವುಗಳ ಹೋಲಿಕೆ  

ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.


ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು.


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಯೆಹೋವನು ಸೈತಾನನಿಗೆ, “ನೋಡು, ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ. ಆದರೆ ಅವನ ಮೈಮೇಲೆ ಮಾತ್ರ ಕೈಹಾಕಬೇಡ” ಎಂದು ಅಪ್ಪಣೆಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.


ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು.


ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು