Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಫಳಾದೆನಲ್ಲಾ [ಎಂದು ಪ್ರಲಾಪಿಸುತ್ತಾಳೆ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:11
20 ತಿಳಿವುಗಳ ಹೋಲಿಕೆ  

ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,


“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.


ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು, “ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ.


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.


ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’”


“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.


ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.


ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.


ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು