Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ತೃಣೀಕರಿಸಿದ್ದಾನೆ; ನನ್ನ ಯುವಕರನ್ನು ಭಂಗಪಡಿಸಬೇಕೆಂದು ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಯುವತಿಯನ್ನು ತೊಟ್ಟಿಯಲ್ಲಿನ ದ್ರಾಕ್ಷೆಯ ಹಾಗೆ ತುಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:15
27 ತಿಳಿವುಗಳ ಹೋಲಿಕೆ  

ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.


ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು.


ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.


ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ,


ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.


ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.


ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.


ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.


ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.


ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.


ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.


ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ. ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ, ದ್ರಾಕ್ಷಿಯ ಅಲೆಯು ತುಂಬಿದೆ. ತೊಟ್ಟಿಗಳು ತುಂಬಿ ತುಳುಕುತ್ತಿವೆ. ಜನಾಂಗಗಳ ದುಷ್ಟತನವು ವಿಪರೀತವಾಗಿದೆ.


ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು