Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:9
46 ತಿಳಿವುಗಳ ಹೋಲಿಕೆ  

ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.


ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.


ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.


ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.


ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!


“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.


ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?


ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.


ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


“ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.


ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.


ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!


ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.


ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.


ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’


ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ


ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.


ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.


“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.


ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.


ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.


ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.


ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?


ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು