Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಿಂದುಕೊಳ್ಳಲೋ? ಯಾಜಕರೂ ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:20
24 ತಿಳಿವುಗಳ ಹೋಲಿಕೆ  

ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.


ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’”


ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.


ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?


ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”


ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.


ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ.


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಆತನು ಅವರಿಗೆ, “ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು