Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:21
33 ತಿಳಿವುಗಳ ಹೋಲಿಕೆ  

ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.”


ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಕೊಂದು ಹಾಕಿದ್ದೀ.


ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.


“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.


ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.


ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!


ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ; ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು;


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.


ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.


ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.


ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.


ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು.


ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.


ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು