Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಸರದಾರರೂ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಧರ್ಮೋಪದೇಶವೇ ಕಾಣೆ; ಅದರ ಪ್ರವಾದಿಗಳಿಗೆ ಕೂಡಾ ಯೆಹೋವನಿಂದ ಯಾವ ದರ್ಶನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:9
27 ತಿಳಿವುಗಳ ಹೋಲಿಕೆ  

ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.


ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.


ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.


ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.


ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.


ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.


ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.


ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.


ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.


ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.


ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು