Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಕರ್ತನು ನಿರಂತರಕ್ಕೂ ಕೈ ಬಿಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನರಮಾನವನನ್ನು ಸ್ವಾಮಿ ಸದಾಕಾಲಕ್ಕೂ ತೊರೆದುಬಿಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಕರ್ತನು ಸದಾಕಾಲಕ್ಕೂ ಬಿಟ್ಟುಬಿಡುವವನಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನು ಜನರನ್ನು ಶಾಶ್ವತವಾಗಿ ತೊರೆದುಬಿಡುವುದಿಲ್ಲ ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಏಕೆಂದರೆ ಕರ್ತದೇವರು ಜನರನ್ನು ಎಂದೆಂದಿಗೂ ತಳ್ಳಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:31
15 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.


“ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?


ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


“ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.


ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ.


ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.


ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ” ಎಂದು ಹೇಳಿದನು.


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು