Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ನಾವು ಅವಿಧೇಯರಾಗಿ ಪಾಪಮಾಡಿದೆವು ನೀನು ಕ್ಷಮಿಸಲಿಲ್ಲ ನಮ್ಮನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷವಿುಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ನಾವು ದಂಗೆ ಎದ್ದಿದ್ದೇವೆ ಮತ್ತು ಅವಿಧೇಯರಾಗಿದ್ದೇವೆ. ಆದ್ದರಿಂದ ನೀನು ನಮ್ಮನ್ನು ಕ್ಷಮಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ, ನೀವು ಮನ್ನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:42
16 ತಿಳಿವುಗಳ ಹೋಲಿಕೆ  

ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


“ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?


“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!


ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,


ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.


“ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು