Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು ಭಯಪಡಬೇಡ ಎಂದು ಹೇಳಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು, “ಭಯಪಡಬೇಡ,” ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:57
16 ತಿಳಿವುಗಳ ಹೋಲಿಕೆ  

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.


‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.


ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.


ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.


ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು