Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ, ಅವಳ ಯಾಜಕರ ಅಕ್ರಮಗಳಿಗೋಸ್ಕರವೂ ಹೀಗಾಯಿತು. ಏಕೆಂದರೆ ಇವರು ನೀತಿವಂತರ ರಕ್ತವನ್ನು ಅವರ ಮಧ್ಯದಲ್ಲಿ ಚೆಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:13
18 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.


ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು