Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನ ಉಗ್ರದೃಷ್ಟಿಯು ಅವರನ್ನು ಚದರಿಸಿದೆ; ಆತನು ಇನ್ನು ಕಟಾಕ್ಷಿಸನು. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. ಆತನು ಯಾಜಕರನ್ನು ಗೌರವಿಸಲಿಲ್ಲ. ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:16
20 ತಿಳಿವುಗಳ ಹೋಲಿಕೆ  

ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು.


‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,


ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.


ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.


ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.


ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು