Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿ ಮಾಡಿಕೊಂಡಿರುವದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು, ಹೌದು, ನಮಗೆ ಅಂತ್ಯವು ಬಂದೇ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. ನಮ್ಮ ಅಂತ್ಯವು ಸಮೀಪಿಸಿತು. ನಮ್ಮ ಕಾಲವು ಮುಗಿಯಿತು; ನಮ್ಮ ಕೊನೆಯು ಬಂದಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:18
16 ತಿಳಿವುಗಳ ಹೋಲಿಕೆ  

ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.


ನಿಷ್ಕಾರಣವಾಗಿ ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


“ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.


ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.


ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು.


ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.


ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ; ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ.


ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು