Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:21
24 ತಿಳಿವುಗಳ ಹೋಲಿಕೆ  

“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.


ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”


“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.


ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.


ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.


ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.


ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು