Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಯಾರೂ ಅನ್ನವಿಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಳೆಕೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಸುಳೆಗಳ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ. ಎಳೆಯ ಕೂಸುಗಳು ಅನ್ನ ಕೇಳುತ್ತವೆ. ಆದರೆ ಅವರಿಗೆ ಯಾರೂ ಅದನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:4
12 ತಿಳಿವುಗಳ ಹೋಲಿಕೆ  

ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.


ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.


ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.


ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು