Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಮಗಾದ ದುರ್ಗತಿಯನ್ನು ಚಿತ್ತಕ್ಕೆ ತಂದುಕೋ; ನಾವು ಗುರಿಯಾಗಿರುವ ದೂಷಣೆಯನ್ನು ದೃಷ್ಟಿಸಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:1
26 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ,


ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ.


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.


ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.


ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು.


“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ?


ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.


ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;


ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.


ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.


ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,


ನನ್ನ ಕಣ್ಣುಗಳು ನಿರಂತರವಾಗಿ ಅಶ್ರುಧಾರೆ ಸುರಿಸುವುದನ್ನು, ಎಂದಿಗೂ ಬಿಡದು.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.


ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು