Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಿಂದಟ್ಟಿ ಬಂದವರು ಹಿಡಿದರು ನಮ್ಮ ಕುತ್ತಿಗೆ ಬಳಲಿ ಬೆಂಡಾಗಿದ್ದೇವೆ ವಿಶ್ರಾಂತಿಯಿಲ್ಲದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಮ್ಮನ್ನು ಹಿಂದಟ್ಟುವವರು ನಮ್ಮ ಹೆಗ್ಗತ್ತನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮರಣದವರೆಗೂ ನಾವು ಹಿಂದಟ್ಟಲ್ಪಟ್ಟಿದ್ದೇವೆ. ನಾವು ಬಳಲಿಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಮ್ಮನ್ನು ಹಿಂಬಾಲಿಸುವವರು ನಮ್ಮ ನೆರಳಿನಲ್ಲೇ ಇದ್ದಾರೆ; ನಾವು ದಣಿದಿದ್ದೇವೆ ಮತ್ತು ವಿಶ್ರಾಂತಿಯನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:5
14 ತಿಳಿವುಗಳ ಹೋಲಿಕೆ  

ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.


ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.


ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.


ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?


ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


“ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,


ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.


ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.


ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು