Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಕಾಶದ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸಲು ಮನಸ್ಸಿಟ್ಟೆನು; ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಆ ಕೆಲಸವೆಲ್ಲಾ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:13
22 ತಿಳಿವುಗಳ ಹೋಲಿಕೆ  

ಮನುಷ್ಯನಿಗೆ ಕರ್ತವ್ಯವೆಂದು ದೇವರು ನೇಮಿಸಿರುವ ಪ್ರಯಾಸವನ್ನು ನೋಡಿದ್ದೇನೆ.


ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.


ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.


ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.


ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.


ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.


ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.


ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ.


ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.


ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.


ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.


ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು.


ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.


ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು