Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಲ್ಲಾ ವಸ್ತುಗಳು ಬಳಲಿಹೋಗುವವು; ಇದನ್ನು ಮನುಷ್ಯನು ವಿವರಿಸಲಾರನು. ಕಣ್ಣು ನೋಡಿ ನೋಡಿ ತೃಪ್ತಿಗೊಳ್ಳದು, ಕಿವಿಯು ಕೇಳಿ ಕೇಳಿ ದಣಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಾತುಗಳಿಂದ ಯಾವುದನ್ನೂ ಸಂಪೂರ್ಣವಾಗಿ ವಿವರಿಸಲು ಸಾಧ್ಯವಿಲ್ಲ; ಆದರೂ ಜನರು ಮಾತಾಡುತ್ತಲೇ ಇರುವರು. ನಮ್ಮ ಕಿವಿಗಳು ಮಾತುಗಳನ್ನು ಕೇಳುತ್ತಲೇ ಇರುತ್ತವೆ; ಆದರೂ ನಮ್ಮ ಕಿವಿಗಳು ತುಂಬುವುದಿಲ್ಲ. ನಮ್ಮ ಕಣ್ಣುಗಳು ನೋಡುತ್ತಲೇ ಇರುತ್ತವೆ; ಆದರೂ ಅವು ತುಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:8
16 ತಿಳಿವುಗಳ ಹೋಲಿಕೆ  

ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.


“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.


ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.


ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.


ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”


ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು