Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ ಹೆಚ್ಚು ಬಲಪ್ರಯೋಗ ಮಾಡಬೇಕಾಗುವುದು. ಕಾರ್ಯಸಿಧ್ಧಿಗೆ ಜ್ಞಾನವೇ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೊಂಡುಕೊಡಲಿಯ ಬಾಯಿ ಮೊನೆಮಾಡದಿದ್ದರೆ ಹೆಚ್ಚು ಬಲವನ್ನು ಪ್ರಯೋಗಿಸಬೇಕಲ್ಲವೆ; ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೊಂಡಕತ್ತಿಯನ್ನು ಹರಿತಗೊಳಿಸಿದರೆ ಕೆಲಸ ಸುಲಭವಾಗುವಂತೆಯೇ ಜ್ಞಾನವು ಯಾವ ಕೆಲಸವನ್ನಾದರೂ ಸುಲಭಗೊಳಿಸಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:10
20 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.


ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.


ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.


ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.


‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.


ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ.


ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.


ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು