Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಹೃದಯದಿಂದ ಕರಕರೆಯನ್ನೂ ದೇಹದಿಂದ ಶ್ರಮೆಯನ್ನೂ ತೊಲಗಿಸು; ಬಾಲ್ಯವೂ ಪ್ರಾಯವೂ ವ್ಯರ್ಥವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:10
14 ತಿಳಿವುಗಳ ಹೋಲಿಕೆ  

ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.


ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.


ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.


ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ


ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.


ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು, ನನ್ನ ಯೌವನದ ಪಾಪಗಳ ಬಾಧ್ಯತೆಯನ್ನು ನನಗೆ ಕೊಟ್ಟಿದ್ದಿ.


ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.


ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.


ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು