Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:14
17 ತಿಳಿವುಗಳ ಹೋಲಿಕೆ  

ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.


ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.


ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.


ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.


ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”


ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು