Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ; ಯಾವ ಸಂತೋಷವನ್ನನುಭವಿಸುವದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ; ಏಕಂದರೆ ನನ್ನ ಹೃದಯವು ನನ್ನ ಕಾರ್ಯಗಳಲ್ಲೆಲ್ಲಾ ಹರ್ಷಿಸುತ್ತಿತ್ತು; ನನ್ನ ಪ್ರಯಾಸದಿಂದೆಲ್ಲಾ ನನಗಾದ ಲಾಭವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕೆಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:10
21 ತಿಳಿವುಗಳ ಹೋಲಿಕೆ  

ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.


ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.


ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.


ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.


ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.


ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,


ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು.


ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.


ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.


ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.


ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.


ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.


ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.


ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.


ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.


ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು