Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ನಾನೇ ಸ್ವತಃ ಮಾಡಿದ ಎಲ್ಲಾ ಕೆಲಸಕಾರ್ಯಗಳನ್ನೂ ಪಟ್ಟ ಎಲ್ಲ ಪ್ರಯಾಸವನ್ನೂ ಗಮನವಿಟ್ಟು ಪರಿಶೀಲಿಸಿದೆ. ಆದರೆ ಇಗೋ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಎಲ್ಲವೂ ವ್ಯರ್ಥ; ಲೋಕದಲ್ಲಿ ಲಾಭಕರವಾದುದು ಏನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ನನ್ನ ಕೈಯಿಂದ ನಡಿಸಿದ ಎಲ್ಲಾ ಕೆಲಸಗಳಲ್ಲಿಯೂ ನಾನು ಪಟ್ಟ ಪ್ರಯಾಸದಲ್ಲಿಯೂ ದೃಷ್ಟಿಯಿಟ್ಟೆನು; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು, ಲೋಕದಲ್ಲಿ ಯಾವ ಲಾಭವೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಕೈಗಳು ನಡೆಸಿದವುಗಳೆಲ್ಲವನ್ನೂ ನಾನು ಸಾಧಿಸಲು ಪ್ರಯಾಸಪಟ್ಟದ್ದನ್ನೂ ಪರಿಶೀಲಿಸಿ ನೋಡಿದೆ. ಗಾಳಿಯನ್ನು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥವಾಗಿತ್ತು. ಸೂರ್ಯನ ಕೆಳಗೆ ಯಾವುದೂ ಲಾಭಕರವಾಗಿ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:11
13 ತಿಳಿವುಗಳ ಹೋಲಿಕೆ  

ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.


ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು?


ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.


ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.


ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.


ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.


ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು?


ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.


ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು