Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಏಕಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ನಿರಂತರವಾಗಿ ಮರೆತುಹೋಗುವನು. ಈಗಿನವರೆಲ್ಲಾ ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರಷ್ಟೆ. ಆಹಾ, ಮೂಢನಂತೆ ಜ್ಞಾನಿಯೂ ಸಾಯುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೆಂದರೆ ಮೂಢನು ಸಾಯುವಂತೆ ಜ್ಞಾನಿಯೂ ಸಾಯುವುದರಿಂದ ಜನರು ಜ್ಞಾನಿಯನ್ನಾಗಲಿ ಮೂಢನನ್ನಾಗಲಿ ಸದಾಕಾಲ ಜ್ಞಾಪಿಸಿಕೊಳ್ಳುವುದಿಲ್ಲ. ಅವರ ಕಾರ್ಯಗಳನ್ನು ಮುಂದಿನ ಕಾಲದ ಜನರು ಮರೆತುಬಿಡುವರು. ಆದ್ದರಿಂದ ಜ್ಞಾನಿಗೂ ಮೂಢನಿಗೂ ಯಾವ ವ್ಯತ್ಯಾಸವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ಬಹಳ ದಿನಗಳವರೆಗೆ ಜ್ಞಾಪಕಮಾಡಿಕೊಳ್ಳುವುದಿಲ್ಲ. ಇವರಿಬ್ಬರನ್ನೂ ಮರೆತುಹೋದ ದಿನಗಳು ಈಗಾಗಲೇ ಬಂದಿವೆ. ಮೂಢನಂತೆ ಜ್ಞಾನಿಯೂ ಸಹ ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:16
17 ತಿಳಿವುಗಳ ಹೋಲಿಕೆ  

ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.”


ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.


ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ, ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ?


ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.


ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,


ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು?


ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.


ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.


ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ?


ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು.


ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.


ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.


ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.


ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.


ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು