Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಲೋಕದಲ್ಲಿ ಮಾನವನು ಹೃತ್ಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೂರ್ಯನ ಕೆಳಗೆ ತಾನು ಪ್ರಯಾಸಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:22
21 ತಿಳಿವುಗಳ ಹೋಲಿಕೆ  

ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು?


ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.


ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.


ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.


ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು?


ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.


ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.


ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.


ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.


“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.


ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, ದುಡಿಯಲಿಕ್ಕೆ ಅವನ ಬಾಯೇ ಅವನನ್ನು ಒತ್ತಾಯ ಮಾಡುವುದು.


ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.


ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು